ಈ ಕಾರ್ಡ್ ನಿಮ್ಮ ಬಳಿ ಇದ್ದರೆ ನಿಮ್ಮ ಖಾತೆಗೆ ನೇರವಾಗಿ 10 ಸಾವಿರ ಜಮಾ..! ಯಾವ ಕಾರ್ಡ್ ಹೇಗೆ ಅರ್ಜಿ ಸಲ್ಲಿಸಬೇಕು ಹೇಗೆ ಪಡೆದುಕೊಳ್ಳಬೇಕು ಇಲ್ಲಿದೆ ನೋಡಿ ಮಾಹಿತಿ..!

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 10 ಸಾವಿರ ರೂ. ಜಮಾ: ಭೂಸಿರಿ ಯೋಜನೆಯಡಿ ನೆರವು; ಸಿಎಂ ಬಸವರಾಜ ಬೊಮ್ಮಾಯಿ

WhatsApp Group Join Now
Telegram Group Join Now

ಜನ ಕಲ್ಯಾಣವೇ ನಮ್ಮ ಸರ್ಕಾರದ ಜನಪರ ನೀತಿಯಾಗಿದೆ. ನಾಡಿನ ಜನರು ಶ್ರೀಮಂತರಾದರೆ, ನಾಡು ಶ್ರೀಮಂತವಾಗುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈಗೆ ಸರ್ಕಾರದ ಯೋಜನೆಗಳು ನೇರವಾಗಿ ತಲುಪವಂತೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪಿವೆ ಎಂಬುದನ್ನು ತಿಳಿಸುವುದು ಫಲಾನುಭವಿಗಳ ಸಮ್ಮೇಳನದ ಮುಖ್ಯ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಚಿತ್ರದುರ್ಗ ನಗರದ ಮುರುಘಾರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಶನಿವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಹಾಗೂ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 1,484.69 ಕೋಟಿ ರೂ.ಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಪ್ರಸಕ್ತ ವರ್ಷದಿಂದ ಭೂಸಿರಿ ಯೋಜನೆ ಜಾರಿ :

ರೈತರು, ಮಹಿಳೆಯರು, ಯುವಕ ಯುವತಿಯುರು, ದೀನದಲಿತರು ಸೇರಿದಂತೆ ಎಲ್ಲಾ ವರ್ಗದ ಶ್ರೇಯೋಭಿವೃದ್ಧಿಗಾಗಿ ದೂರದೃಷ್ಟಿ ಯೋಜನೆಗಳನ್ನು ನಮ್ಮ ಸರ್ಕಾರದಲ್ಲಿ ಅವಳವಡಿಸಿಕೊಳ್ಳಲಾಗಿದೆ. ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಭೂ ಸಿರಿ ಯೋಜನೆ ಜಾರಿಗೆ ತರಲಾಗುತ್ತಿದೆ. ಬಿತ್ತನೆ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ 10,000 ರೂ. ಗಳನ್ನು ರೈತರ ಖಾತೆ ಜಮೆ ಮಾಡಲಾಗುವುದು. ಬಿತ್ತನೆ ಬೀಜ, ಗೊಬ್ಬರ ಖರೀದಿಗಾಗಿ ರೈತರು ಸಾಲ ಮಾಡದಂತೆ ತಡೆಯುಲು ಯೋಜನೆ ಜಾರಿಗೊಳಿಸಲಾಗುತ್ತಿದೆ.
ಮನೆ ಖರ್ಚು ನಿಭಾಯಿಸಲು ಹೆಣ್ಣು ಮಕ್ಕಳಿಗೆ ಮಾಸಿಕ 1000 ರೂ., ದುಡಿಯವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್, ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂ. ಅನುದಾನ, ಸ್ವಾಮಿ ವಿವೇಕಾನಂದ ಯೋಜನೆಯಡಿ ಯುವಕರ ಸಂಘಕ್ಕೆ 2 ಲಕ್ಷ ರೂ. ಅನುದಾನ ನೀಡಿ, ಸಂಘದ ಉತ್ಪನಗಳಿಗೆ ಮಾರುಕಟ್ಟೆ ಒದಗಿಸಲಾಗುವುದು. ಕಾಯಕ ಯೋಜನೆಯಡಿ ಗುಡಿ ಕೈಗಾರಿಕೆ ಸೇರಿದಂತೆ ಕಮ್ಮಾರಿಕೆ, ಕುಂಬಾರಿಕೆ, ಬಡಗಿ ಹಾಗೂ ಇತರೆ ವಿಶ್ವಕರ್ಮ ಕಾಯಕಗಳನ್ನು ಉನ್ನತಿಕರಿಸಲು ರೂ.50 ಸಾವಿರ ಅನುದಾನ ನೀಡಲಾಗುವುದು. ಈ ಬಾರಿ ಸರ್ಕಾರಿ ಕಾಲೇಜುಗಳಲ್ಲಿ ಓದುವ ಪಿಯುಸಿ ಹಾಗೂ ಡಿಗ್ರಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಅನುಮೋದನೆ: ಚಿತ್ರದುರ್ಗ ಜಿಲ್ಲೆಯ ಬಹುದಿನಗಳ ಬೇಡಿಕೆಯಾದ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಒಂದು ವಾರದಲ್ಲಿ ಅನುಮೋದನೆ ನೀಡುವುದಾಗಿ ಮುಖ್ಯಮಂತ್ರಿ ಆಶ್ವಾಸನೆ ನೀಡಿದರು. ಶೀಘ್ರದಲ್ಲಿ ಮತ್ತೊಮ್ಮೆ ಚಿತ್ರದುರ್ಗ ನಗರಕ್ಕೆ ಆಗಮಿಸಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಯನ್ನೂ ನೆರವೇರಿಸುವುದಾಗಿ ಹೇಳಿದರು.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳು ದಲಿತರಿಗೆ, ಪರಿಶಿಷ್ಟ ಪಂಗಡಕ್ಕೆ ಅವಶ್ಯಕವಾಗಿರುವ ಅನೇಕ ಯೋಜನೆಗಳನ್ನು ಜಾರಿಗೊಳಿಸಿ, ಪರಿಶಿಷ್ಟ ಜಾತಿಗೆ ಶೇ.15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3 ರಿಂದ 7ಕ್ಕೆ ಮೀಸಲಾತಿ ಹೆಚ್ಚಿಸಿ ಪರಿಶಿಷ್ಟ ವರ್ಗದವರ ಹೃದಯ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ರಾಜ್ಯದ ರೈತರು ಸಶಕ್ತವಾಗುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಒಟ್ಟು 10 ಸಾವಿರ ರೂ. ಗಳನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ ರೈತರಿಗೆ ಕೊಡಲಾಗುತ್ತಿದೆ. ರೈತರ ಮಕ್ಕಳಿಗೆ ಮುಖ್ಯಮಂತ್ರಿ ರೈತವಿದ್ಯಾನಿಧಿ ಮೂಲಕ ಕಳೆದ ವರ್ಷ ರಾಜ್ಯದಲ್ಲಿ 10 ಲಕ್ಷ ಮಕ್ಕಳಿಗೆ 686 ಕೋಟಿ ರೂ. ನೀಡಿದೆ ಎಂದರು.

ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, 18 ಲಕ್ಷ ಜನಸಂಖ್ಯೆ ಇರುವ ಚಿತ್ರದುರ್ಗ ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯದ ಸರ್ಕಾರದ ವಿವಿಧ ಯೋಜನೆಗಳಡಿ ಸುಮಾರು 9 ಲಕ್ಷ ಫಲಾನುಭವಿಗಳಾಗಿದ್ದಾರೆ. ರೈತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರು ಸೇರಿದಂತೆ ಎಲ್ಲ ವರ್ಗದವರಿಗೆ ರಾಜ್ಯದ ಮುಖ್ಯಮಂತ್ರಿಗಳು ಸೌಲಭ್ಯ ನೀಡಿದ್ದಾರೆ ಎಂದರು.
ಭೂ ಸಿರಿ ಯೋಜನೆ 2023

ಕರ್ನಾಟಕ ಸರ್ಕಾರದಲ್ಲಿ ಈ ಬಾರಿ ಬಜೆಟ್‌ ನಲ್ಲಿ ಹೊಸ ಯೋಜನೆಯನ್ನು ಪರಿಚಯಿಸಿದ್ದಾರೆ. ಇಂತಹ ಯೋಜನೆಗೆ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದಲೂ ಸಹಾಯಧನವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಿಸಾನ್‌ ಕಾರ್ಡ್‌ ಹೊಂದಿರುವ ರೈತರಿಗೆ ಭೂ ಸಿರಿ ಎಂಬ ಹೊಸ ಯೋಜನೆಯನ್ನು ಪರಿಚಯಿಸಲಾಗಿದೆ
ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಹೊಂದಿರುವ ರೈತರಿಗೆ ಭೂ ಸಿರಿ ಎಂಬ ಹೊಸ ಯೋಜನೆ ಪರಿಚಯಿಸಲಾಗಿದೆ.

ಈ ಯೋಜನೆಯಡಿಯಲ್ಲಿ 2023-24 ನೇ ಸಾಲಿನಿಂದ ರೈತರಿಗೆ 10 ಸಾವಿರ ರೂ. ಹೆಚ್ಚುವರಿ ಸಹಾಯಧನ ನೀಡಲಾಗುವುದು. ಇದರಿಂದ ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್‌ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.
ಭೂ ಸಿರಿ ಯೋಜನೆ ಅಡಿಯಲ್ಲಿ 10,000ಗಳನ್ನು ಪಡೆದುಕೊಳ್ಳಲು ಕಿಸಾನ್ ಕ್ರೆಡಿಟ್ ಕಾರ್ಡ್ ಅವಶ್ಯಕ.!!
ಹಾಗಾದರೆ

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದುಕೊಳ್ಳುವುದು ಹೇಗೆ ?

ರೈತರು ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಕೆಟ್ಟ ನಿರ್ಧಾರ ಮಾಡಿಕೊಳ್ಳುವುದು ಹೆಚ್ಚಾಗುತ್ತಿದ್ದಂತೆ ರೈತರಿಗಾಗಿ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಆರಂಭ ಮಾಡಿದೆ. ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ತಮ್ಮ ಹಣಕಾಸು ಅಗತ್ಯವನ್ನು ಸರಿದೂಗಿಸಬಹುದಾಗಿದೆ.

ಈ ಯೋಜನೆಯನ್ನು 1998ರಲ್ಲಿ ಅಂದಿನ ಕೇಂದ್ರ ಸರ್ಕಾರ ಆರಂಭ ಮಾಡಿದೆ. ನಬಾರ್ಡ್ ಅಡಿಯಲ್ಲಿ ಈ ಯೋಜನೆ ಬರುತ್ತದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ರೈತರು ಅಧಿಕ ಬಡ್ಡಿದರಕ್ಕೆ ಬಲಿಪಶುವಾಗದಂತೆ ಸಹಾಯ ಮಾಡುತ್ತದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಪಡೆಯುವ ಸಾಲದ ಮೇಲೆ ಕೇವಲ ಶೇಕಡ 2ರಿಂದ ಶೇಕಡ 4ರಷ್ಟು ಬಡ್ಡಿದರವನ್ನು ವಿಧಿಸಲಾಗುತ್ತದೆ. ನೀವು ಕೂಡಾ ರೈತರಾಗಿದ್ದರೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಆನ್‌ಲೈನ್ ಮೂಲಕ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ, ಅದಕ್ಕೆ ಬೇಕಾದ ದಾಖಲೆಗಳು ಯಾವುದು ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ…

ಕಿಸಾನ್ ಕ್ರೆಡಿಟ್ ಕಾರ್ಡ್‌ನ ಮುಖ್ಯ ಮಾಹಿತಿ

  • ಕೃಷಿ ಹಾಗೂ ವ್ಯವಸಾಯ ನಡೆಸಿದ ಬಳಿಕ ತಗಲುವ ಖರ್ಚುಗಳಿಗಾಗಿ ಈ ಯೋಜನೆಯಲ್ಲಿ ರೈತರಿಗೆ ಸಾಕವನ್ನು ನೀಡಲಾಗುತ್ತದೆ.
  • ಕೃಷಿ ಸಂಬಂಧಿತ ಉಪಕರಣವನ್ನು ಖರೀದಿ ಮಾಡಲು ಅಥವಾ ಅದನ್ನು ಬಾಡಿಗೆಗೆ ಪಡೆಯಲು ಹಣವನ್ನು ಈ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲವಾಗಿ ಪಡೆದುಕೊಳ್ಳಬಹುದು.
  • ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸುಮಾರು 3 ಲಕ್ಷ ರೂಪಾಯಿವರೆಗೆ ಸಾಲವಾಗಿ ಪಡೆಯಬಹುದು.
  • ರೈತರ ಸಾವು ಅಥವಾ ರೈತರಿಗೆ ಯಾವುದೇ ಅಂಗವೈಕಲ್ಯತೆಯಾದರೆ ಈ ಯೋಜನೆಯಡಿಯಲ್ಲಿ ಸುಮಾರು 50 ಸಾವಿರ ರೂಪಾಯಿವರೆಗೆ ವಿಮೆಯನ್ನು ಪಡೆಯಬಹುದು. ಬೇರೆ ಅವಘಡಗಳಿಗೆ 25 ಸಾವಿರ ರೂಪಾಯಿವರೆಗೆ ವಿಮೆಯನ್ನು ಪಡೆಯಬಹುದು.
  • ಉಳಿತಾಯ ಖಾತೆಯ ಅಡಿಯಲ್ಲಿ ಈ ಸ್ಮಾರ್ಟ್ ಕಾರ್ಡ್ ಹಾಗೂ ಡೆಬಿಟ್ ಕಾರ್ಡ್ ಅನ್ನು ನೀಡಲಾಗುತ್ತದೆ.
  • ಸುಲಭವಾಗಿ ಮರುಪಾವತಿ ಮಾಡಲು ಸಾಧ್ಯವಾಗಲಿದೆ.
  • 3 ವರ್ಷಗಳ ಅವಧಿಗೆ ಈ ಯೋಜನೆಯಲ್ಲಿ ಸಾಲವನ್ನು ಪಡೆಯಬಹುದು.

ಯಾವೆಲ್ಲ ದಾಖಲೆಗಳು ಬೇಕು ?

  • ಎಲ್ಲ ದಾಖಲೆಗಳನ್ನು ಹೊಂದಿರುವ ಹಾಗೂ ಭರ್ತಿ ಮಾಡಿ ಸಹಿ ಮಾಡಲಾದ ಅರ್ಜಿ
  • ಗುರುತಿನ ಪುರಾವೆಗಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಬೇಕಾಗುತ್ತದೆ
  • ವಿಳಾಸ ಪುರಾವೆಗಾಗಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ಬೇಕಾಗುತ್ತದೆ
  • ಈ ದಾಖಲೆಯಲ್ಲಿ ಅರ್ಜಿದಾರರು ವಾಸ್ತವ್ಯದಲ್ಲಿ ಇರುವ ವಿಳಾಸವೇ ಇರಬೇಕಾಗುತ್ತದೆ
  • ಜಾಗಕ್ಕೆ ಸಂಬಂಧಿಸಿದ ದಾಖಲೆಗಳು ಅಗತ್ಯವಾಗಿದೆ
  • ಪಾಸ್‌ಪೋರ್ಟ್ ಗಾತ್ರದ ಫೋಟೋ ಕೂಡಾ ಬೇಕಾಗುತ್ತದೆ
  • ಬ್ಯಾಂಕ್‌ ಕೇಳುವಂತಹ ದಾಖಲೆಗಳನ್ನು ಕೂಡಾ ಸಲ್ಲಿಕೆ ಮಾಡಬೇಕಾಗುತ್ತದೆ

ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಹೀಗೆ ಅರ್ಜಿ ಸಲ್ಲಿಸಿ
ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಆನ್‌ಲೈನ್ ಮೂಲಕ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಈ ಬಗ್ಗೆ ಇಲ್ಲಿದೆ ವಿವರ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ?

ಹಂತ 1: ನೀವು ಯಾವ ಬ್ಯಾಂಕ್‌ನಿಂದ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತೀರೋ ಆ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಹಂತ 2: ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ಆಯ್ಕೆ ಮಾಡಿ
ಹಂತ 3: apply ಮೇಲೆ ಕ್ಲಿಕ್ ಮಾಡಿ
ಹಂತ 4: ಫಾರ್ಮ್ ಅನ್ನು ಭರ್ತಿ ಮಾಡಿಕೊಳ್ಳಿ
ಹಂತ 5: submit ಮೇಲೆ ಕ್ಲಿಕ್ ಮಾಡಿದರೆ ಎಲ್ಲ ಪ್ರಕ್ರಿಯೆ ಪೂರ್ಣವಾಗಲಿದೆ

ಆಫ್‌ಲೈನ್ ಮೂಲಕ ಅರ್ಜಿ ಹೀಗೆ ಸಲ್ಲಿಸಿ

ಹಂತ 1: ಬ್ಯಾಂಕ್‌ನ ಬ್ರಾಂಚ್‌ಗೆ ಭೇಟಿ ನೀಡಿ
ಹಂತ 2: ಬ್ಯಾಂಕ್‌ನ ಪ್ರತಿನಿಧಿಗಳ ಸಹಾಯದ ಮೂಲಕ ಫಾರ್ಮ್ ಅನ್ನು ಭರ್ತಿ ಮಾಡಿಕೊಳ್ಳಿ
ಹಂತ 3: ಎಲ್ಲ ಅಗತ್ಯ ದಾಖಲೆಗಳನ್ನು ಲಗತ್ತಿಸಿ
ಹಂತ 4: ದಾಖಲೆ ಹಾಗೂ ಫಾರ್ಮ್ ಅನ್ನು ಬ್ಯಾಂಕ್‌ಗೆ ಸಲ್ಲಿಕೆ ಮಾಡಿದರೆ ಎಲ್ಲ ಪ್ರಕ್ರಿಯೆ ಪೂರ್ಣವಾಗಲಿದೆ

Leave a Reply

Your email address will not be published. Required fields are marked *