ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಬಯಸುವವರಿಗೆ ಸಿಹಿ ಸುದ್ದಿ..!
ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ದಿನನಿತ್ಯ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಕ್ಕಾಗಿ ಹುಡುಕುತ್ತಿರುವಂತಹ ಯುವಕ ಯುವತಿಯರಿಗೆ ಪ್ರತಿನಿತ್ಯ ನಾವು ಮಾಹಿತಿಯನ್ನು ಒದಗಿಸುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರೇಷನ್ ಕಾರ್ಡ್ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!
ಹೌದು ಸ್ನೇಹಿತರೆ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಸ್ಟೇಟಸ್ ಬದಲಾವಣೆಯಾಗಿದ್ದು ನಿಮ್ಮ ರೇಷನ್ ಕಾರ್ಡ್ ಅರ್ಜಿ ಅಪ್ರುವಲ್ ಆಗಿದೆಯಾ ಅಥವಾ ರಿಜೆಕ್ಟ್ ಆಗಿದೆಯಾ ಈಗಲೇ ಚೆಕ್ ಮಾಡಿಕೊಳ್ಳಿ..!
ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ..?
https://ahara.kar.nic.in/Home/EServices
ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ನೀವು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ..
ಹೌದು ಸ್ನೇಹಿತರೆ ರೇಷನ್ ಕಾರ್ಡ್ ಸ್ಟೇಟಸ್ ನಲ್ಲಿ ಹಲವು ಬದಲಾವಣೆಗಳಾಗಿದ್ದು ಹೊಸ ಅರ್ಜಿದಾರರಿಗೆ ಗುಡ್ ನ್ಯೂಸ್ ರಾಜ್ಯ ಸರ್ಕಾರ ನೀಡಲಾಗಿದ್ದು ನಿಮ್ಮ ಸ್ಟೇಟಸ್ ಈಗಲೇ ಚೆಕ್ ಮಾಡಿಕೊಳ್ಳಿ..
ರೇಷನ್ ಕಾರ್ಡ್ ಕ್ಯಾನ್ಸಲೇಷನ್!
ಬಿಪಿಎಲ್ ಮತ್ತು ಎ ಎ ವೈ ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ನೀಡಲಾಗುತ್ತದೆ. ಇದರಿಂದ ಸರ್ಕಾರದ ಯೋಜನೆಯ ಪ್ರಯೋಜನಗಳು ಹಾಗೂ ಉಚಿತ ಪಡಿತರ ಪಡೆದುಕೊಳ್ಳಲು ಸಾಧ್ಯವಿದೆ.
ಆದರೆ ಇಂದು ಅದೇಷ್ಟೋ ಅರ್ಹ ಕುಟುಂಬಗಳು ಕೂಡ ಬಿಪಿಎಲ್ ಪಡಿತರ ಕಾರ್ಡ್ ಪಡೆದುಕೊಂಡಿರುವುದು ನಿಜಕ್ಕೂ ವಿಷಾದನೀಯ! ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಇರುವವರಿಗೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲು ತೀರ್ಮಾನಿಸಿದ್ದು ಅನರ್ಹರ ರೇಷನ್ ಕಾರ್ಡ್ ರದ್ದುಪಡಿ ಮಾಡುತ್ತಿದೆ.
Ration Card
ಈಗಾಗಲೆ ಲಕ್ಷಾಂತರ ಜನರ ರೇಷನ್ ಕಾರ್ಡ್ ರದ್ದುಪಡಿ ಮಾಡಲಾಗಿದೆ. ಪ್ರತಿ ತಿಂಗಳು ರದ್ದುಪಡಿಗೊಂಡಿರುವ ರೇಷನ್ ಕಾರ್ಡ್ ಲಿಸ್ಟ್ ಅನ್ನು ಆಹಾರ ಇಲಾಖೆಯ ಅಧಿಕೃತ ವೆಬ್ಬೆಟ್ನಲ್ಲಿ ಬಿಡುಗಡೆ https://ahara.kar.nic.in/ & ವೆಬ್ ಸೈಟ್ ನಲ್ಲಿ ನೀವು ಈ ಸರ್ವಿಸ್ ವಿಭಾಗದಲ್ಲಿ ಪಡಿತರ ಚೀಟಿ ರದ್ದಾಗಿರುವ ಬಗ್ಗೆ ಮಾಹಿತಿ ಪಡೆಯಬಹುದು.
ರೇಷನ್ ಕಾರ್ಡ್ (Ration Card) ಕೂಡ ಇಂದು ಆಧಾರ್ ಕಾರ್ಡ್ (Aadhaar Card) ಹಾಗೂ ಇತರ ದಾಖಲೆಗಳಂತೆ ಪ್ರಮುಖ ದಾಖಲೆಯಾಗಿ ಗುರುತಿಸಿಕೊಂಡಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಪಡಿತರ ಚೀಟಿ ಬಹಳ ಮುಖ್ಯವಾಗಿರುವ ದಾಖಲೆ ಆಗಿದೆ.
ಇದರಿಂದಾಗಿ ಪ್ರತಿಯೊಬ್ಬರು ಅದರಲ್ಲೂ ವಿಶೇಷವಾಗಿ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಅನ್ನೇ ಪಡೆದುಕೊಳ್ಳಲು ಬಯಸುತ್ತಿದ್ದಾರೆ. ಸರ್ಕಾರ ಇದೀಗ ಗುಡ್ ನ್ಯೂಸ್ ನೀಡಿದ್ದು ಹೊಸ ಪಡಿತರ ಚೀಟಿ ವಿತರಣೆ ಮಾಡುವ ದಿನಾಂಕವನ್ನು ಘೋಷಣೆ ಮಾಡಿದೆ.
ಏಪ್ರಿಲ್ ಒಂದರಿಂದ ಹೊಸ ಪಡಿತರ ಚೀಟಿ ವಿತರಣೆ!
ರಾಜ್ಯ ಆಹಾರ ಸಚಿವ ಕೆಎಚ್ ಮುನಿಯಪ್ಪ ಇತ್ತೀಚಿಗೆ ಪ್ರತಿಪಕ್ಷದ ನಾಯಕ ಆರ್ ಅಶೋಕ ಹಾಗೂ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಅವರು ಕೇಳಿದ ಪ್ರಶ್ನೆಗಳಿಗೆ ವಿಚಾರದ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಸರ್ಕಾರಕ್ಕೆ 2.96 ಲಕ್ಷ ಪಡಿತರ ಚೀಟಿ ಅರ್ಜಿಗಳು ಸಲ್ಲಿಕೆ ಆಗಿವೆ.
ಇದನ್ನ ಇಂದಿನ ಸರ್ಕಾರವು ಕೂಡ ವಿತರಣೆ ಮಾಡದೆ ಹಾಗೆಯೇ ಬಿಟ್ಟಿತು. ಆದರೆ ಈಗ ರಾಜ್ಯ ಸರ್ಕಾರ ಪಡಿತರ ಚೀಟಿ ಬಗ್ಗೆ ವಿಶೇಷವಾದ ನಿರ್ಣಯ ಕೈಗೊಂಡಿದ್ದು, ಮಾರ್ಚ್ 31ರ ಒಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಏಪ್ರಿಲ್ ಒಂದರಿಂದ ಫಲಾನುಭವಿಗಳಿಗೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು!
ಆಧಾರ್ ಕಾರ್ಡ್
ಡ್ರೈವಿಂಗ್ ಲೈಸೆನ್ಸ್
ವೋಟರ್ ಐಡಿ
ಪಾಸ್ ಪೋರ್ಟ್ ಅಳತೆಯ ಫೋಟೋ
ಕುಟುಂಬದ ಸದಸ್ಯರ ಬಗ್ಗೆ ಮಾಹಿತಿ
ಸ್ವಯಂ ಘೋಷಣಾ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ನಿವಾಸದ ಪುರಾವೆ
ಮೊಬೈಲ್ ಸಂಖ್ಯೆ
ಈ ಕೆಲಸ ಮಾಡದೆ ಇದ್ದರೂ ರದ್ದಾಗುತ್ತೇ ರೇಷನ್ ಕಾರ್ಡ್!

ಹೌದು, EKYC ಆಗದೆ ಇರುವ ರೇಷನ್ ಕಾರ್ಡ್ ತಾತ್ಕಾಲಿಕವಾಗಿ ಸ್ಥಿತಿಗೊಳ್ಳಲಿದೆ. ಯಾವಾಗ ಕೆವೈಸಿ ಮಾಡಿಸಿಕೊಳ್ಳುತ್ತೀರೋ ಆಗ ಮತ್ತೆ ತಡೆ ಹಿಡಿಯಲಾದ ರೇಷನ್ ಕಾರ್ಡ್ ಅನ್ನು ಬಿಡುಗಡೆಗೊಳಿಸಲಾಗುತ್ತದೆ.
ಅಂದರೆ ರೇಷನ್ ಕಾರ್ಡ್ ಬಳಸಿ ನೀವು ಉಚಿತ ಪಡಿತರ ಅಥವಾ ಸರ್ಕಾರದ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಇನ್ನು ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಫೆಬ್ರವರಿ 29 2024ರ ವರೆಗೆ ಗಡುಗು ವಿಸ್ತರಣೆ ಮಾಡಲಾಗಿದ್ದು, ಈ ದಿನಾಂಕದೊಳಗೆ ಕೆವೈಸಿ ಮಾಡಿಸಿಕೊಳ್ಳದೆ ಇದ್ದರೆ ನಿಮ್ಮ ರೇಷನ್ ಕಾರ್ಡ್ ಪರ್ಮನೆಂಟ್ ಆಗಿ ರದ್ದಾಗಬಹುದು.
ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಯನ್ನು (Bank Account) ಚೆಕ್ ಮಾಡಿ ಕೆವೈಸಿ ಆಗದೆ ಇದ್ರೆ ತಕ್ಷಣ ಬ್ಯಾಂಕಿಗೆ ಹೋಗಿ ಈ ಕೆಲಸ ಮಾಡಿಕೊಳ್ಳಿ.