ರಾಜ್ಯದ ರೈತರ ಖಾತೆಗೆ ಮೂರನೇ ಹಂತದ ಬರ ಪರಿಹಾರ ಜಮಾ.!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು.!
ಪ್ರೀತಿಯ ರೈತ ಬಾಂಧವರಿಗೆ ಪ್ರಸ್ತುತ ಲೇಖನದಲ್ಲಿ ತಿಳಿಸುವುದೇನೆಂದರೆ ಮೂರನೇ ಹಂತದ ಬರ ಪರಿಹಾರ ರೈತರ ಖಾತಿಗೆ ಜಮಾ ಆಗುತ್ತಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ತಿಳಿದುಕೊಳ್ಳಲು ಈ ಸಂಪೂರ್ಣ ಲೇಖನವನ್ನು ಓದಿ..
ಹೌದು ಸ್ನೇಹಿತರೆ ಎರಡು ಕಂತಿನ ಬರ ಪರಿಹಾರ ರೈತರ ಖಾತೆಗೆ ಜಮಾ ಆಗಿದ್ದು ಇದೀಗ ಮೂರನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ.
ಯಾವ ರೈತರ ಖಾತೆಗೆ ಜಮಾ ಆಗಿದೆ ನಿಮ್ಮ ಖಾತೆಗೆ ಜಮಾ ಆಗಿದೆಯಾ ಅಥವಾ ಇಲ್ಲವೋ ಪರೀಕ್ಷಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ
ರಾಜ್ಯದ ಇನ್ನೂ ಬಹಳ ರೈತರಿಗೆ ಬರಗಾಲ ಪರಿಹಾರ ಜಮೆಯಾಗಿರಲಿಲ್ಲ.
ಮೂರನೇ ಹಂತದ ಬರ ಪರಿಹಾರ | ರೈತರ ಖಾತೆಗೆ ಜಮಾ |
More Information | Click Here |
ಕೆಲವು ರೈತರಿಗೆ ತಾಂತ್ರಿಕ ದೋಷದಿಂದ ಬರಗಾಲ ಪರಿಹಾರ ಹಣ ಜಮೆಯಾಗಿರಲಿಲ್ಲ. ಇನ್ನೂ ಕೆಲವು ರೈತರಿಗೆ ದಾಖಲೆಗಳ ದೋಷಗಳಿಂದಾಗಿ ಬರಗಾಲ ಪರಿಹಾರ ಹಣ ಜಮೆಯಾಗಿರಲಿಲ್ಲ. ಈಗ ಜಮೆಯಾಗದ ರೈತರ ಖಾತೆಗೆ ಬರ ಪರಿಹಾರ ಹಣ ಜಮೆಯಾಗುತ್ತಿದೆ. ಇನ್ನೂ ಕೆಲವು ರೈತರಿಗೆ ಕಡಿಮೆ ಹಣ ಜಮೆಯಾಗಿತ್ತು.
ಈಗ ಬಹುತೇಕ ಯಾರುಯಾರಿಗೆ ಬರಗಾಲ ಪರಿಹಾರ ಹಣ ಜಮೆಯಾಗಿದ್ದಿಲ್ಲವೋ ಅಂತಹ ರೈತರಿಗೆಲ್ಲಾ ಹಣ ಜಮೆಯಾಗಿದೆ.
ನಿಮಗೆಷ್ಟುಹಣ ಜಮೆಯಾಗಿದೆ? ಯಾವ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆ? ಯಾವ ಸರ್ವೆ ನಂಬರ್ ಹಾಗೂ ಯಾವ ಬೆಳೆಗೆ ಬರ ಪರಿಹಾರ ಜಮೆಯಾಗಿದೆ ಎಂಬುದನ್ನುಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
Bara parihara compensation ನಿಮ್ಮ ಖಾತೆಗೆ ಎಷ್ಟು ಬರಗಾಲ ಪರಿಹಾರ ಹಣ ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ
ಯಾವ ಯಾವ ರೈತರಿಗೆ ಬರಗಾಲ ಪರಿಹಾರ ಹಣ ಅಂದರೆ ಮೊದಲು ಮತ್ತು ಎರಡನೇ ಕಂತಿನ ಹಣ ಜಮೆಯಾಗಿಲ್ಲವೋ ಅವರ ಖಾತೆಗೆ ಈಗ ಹಣ ಜಮೆಯಾಗುತ್ತಿದೆ. ಹೌದು, ಬರ ಪರಿಹಾರ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://parihara.karnataka.gov.in/service92
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ನಿಮಗೆ ಭೂಮಿ ಆನ್ಲೈನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ.
ಅಲ್ಲಿ ನೀವು Select Year / ವರ್ಷ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ರೈತರ ಗುರುತಿನ ಸಂಖ್ಯೆ, ಮೊಬೈಲ್ ಸಂಖ್ಯೆಹಾಗೂ ಸರ್ವೆ ನಂಬರ್ ಈ ನಾಲ್ಕರಲ್ಲಿ ಯಾವುದಾದರೊಂದು ಒಂದನ್ನು ಆಯ್ಕೆಮಾಡಿಕೊಳ್ಳಬೇಕು.
Bara parihara compensation ಆಧಾರ್ ನಂಬರ್ ಹಾಕಿ ಬರ ಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ
ಆಧಾರ್ ನಂಬರ್ ಹಾಕಿ ಬರಗಾಲ ಪರಿಹಾರ ಸ್ಸೇಟಸ್ ಚೆಕ್ ಮಾಡಲು ನೀವು ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ನಂತರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಆಧಾರ್ ಕಾರ್ಡ್ ಕೊನೆಯ ಸಂಖ್ಯೆ,ನಿಮ್ಮ ಹೆಸರು ನಿಮ್ಮಎಫ್ಐಡಿ ಕಾಣಿಸುತ್ತದೆ. ಅಲ್ಲಿ ಕಾಣುವ ಸರ್ಕಲ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು.
Bara parihara compensation ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ?
ಎನ್.ಡಿ.ಆರ್.ಎಫ್ / ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ (ಗರಿಷ್ಠ ಎರಡು ಹೆಕ್ಟೇರ್ ಗೆ) ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ / ಖುಷ್ಕಿ ಬೆಳೆಗೆ 8500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ 17000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗೂ ಬಹುವಾರ್ಷಿಕ / ತೋಟಗಾರಿಕೆ ಬೆಳೆಗಳಿಗೆ 22500 ರೂಪಾಯಿವರೆಗೆ ಪರಿಹಾರ ನೀಡಲು ನಿಗದಿಪಡಿಸಲಾಗಿದೆ.