ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓದುಗರೆ ಪ್ರಸ್ತುತ ನಮ್ಮ ಜ್ಞಾನ ಘರ್ಜನೆಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತಿದ್ದು ಇದರ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ..!
ಹೌದು ಸ್ನೇಹಿತರೆ ಸಣ್ಣ ಹಾಗೂ ಅತಿ ಸಣ್ಣ ರೈತರ ಖಾತೆ 3000 ಮೂರನೇ ಹಂತದ ಬರ ಪರಿಹಾರ ಜಮಾ ಆಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆ ಅಥವಾ ಎಲ್ಲವೂ ಎಂದು ಈಗಲೇ ಚೆಕ್ ಮಾಡಿಕೊಳ್ಳಿ
ಬೆಂಗಳೂರು: ರಾಜ್ಯದ 17.09 ಲಕ್ಷ ಸಣ್ಣ, ಅತಿ ಸಣ್ಣ ರೈತ
ಕುಟುಂಬಗಳಿಗೆ ಜೀವನೋಪಾಯ ನಷ್ಟ ಪರಿಹಾರವಾಗಿ ತಲಾ ₹2,800ರಿಂದ ₹3,000 ಸಾವಿರ ನೀಡಲು ಸರ್ಕಾರ ನಿರ್ಧರಿಸಿದೆ.
ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ, ನಿರ್ಣಯ ಕೈಗೊಳ್ಳಲು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆಯ ಬಳಿಕ ಈ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಜೀವನೋಪಾಯ ನಷ್ಟ ಪರಿಹಾರ ವಿತರಿಸಲು ರೈತರ ಪಟ್ಟಿ ಸಿದ್ಧಪಡಿಸಲಾಗಿದೆ’ ಎಂದರು.
2024 25ನೇ ಸಾಲಿನಲ್ಲಿ ಮುಂಗಾರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ…
ಈಗಾಗಲೇ ಜೂನ್ 30ರ ಒಳಗಾಗಿ ಹಲವಾರು ರೈತರು ಮುಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಸಲ್ಲಿಸುತ್ತಿದ್ದು ಯಾವ ಯಾವ ಬೆಳೆಗಳಿಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂದು ನಿಮಗೆ ಈಗಾಗಲೇ ತಿಳಿದಿದೆ..
ಕೇವಲ ಅರ್ಜಿ ಸಲ್ಲಿಸಿದರೆ ಮಾತ್ರ ಬೆಳೆ ಪರಿಹಾರದ ಹಣ ನಿಮ್ಮ ಖಾತೆಗೆ ಬರುವುದಿಲ್ಲ ಇದರ ಜೊತೆಗೆ ನೀವು ನಿಮ್ಮ ಬೆಳೆಯ ಜಿಪಿಆರ್ಎಸ್ ಮಾಡಬೇಕಾಗುತ್ತದೆ ಅದಕ್ಕಾಗಿ ಇನ್ನು ಹಲವು ದಿನಗಳು ಕಲಾವಕಾಶ ಇದ್ದು ಯಾರು ಯಾರು ತಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ ಮಾಡಿಲ್ಲವೋ ತಕ್ಷಣ ಮಾಡಿಕೊಳ್ಳಿ…
ಜಿಪಿಆರ್ಎಸ್ ಮಾಡಲು ಸರ್ಕಾರ ಬಿಡುಗಡೆ ಮಾಡಿದ್ದು ಅದರ ಹೆಸರು ಬೆಳೆ ಸಮೀಕ್ಷೆ ಯಾಪ್…
https://play.google.com/store/apps/details?id=com.csk.farmer23_24.cropsurvey
ಈ ಮೇಲ್ಕಂಡ ಲಿಂಕ್ ಮೇಲೆ ಕೂಡಲೇ ಕ್ಲಿಕ್ ಮಾಡಿ ಕೊಂಡು ನೀವು ಅತಿ ಸುಲಭವಾಗಿ ನಿಮ್ಮ ಹೊಲದಲ್ಲಿರುವ ಬೆಳೆಯುವ ಜಿಪಿಆರ್ಎಸ್ ಮಾಡಬಹುದಾಗಿರುತ್ತದೆ..
ಇದಷ್ಟೇ ಅಲ್ಲದೆ ಈಗಾಗಲೇ ಹಲವಾರು ರೈತರು ತಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ ಮಾಡಿದ್ದು ನೀವು ಮಾಡಿರುವಂತಹ ಜಿಪಿಆರ್ಎಸ್ ಸರಿಯಾಗಿದೆ ಅಥವಾ ಇಲ್ಲವೋ ಹಾಗೆ ಸರ್ಕಾರದಿಂದ ಅಪ್ರುವಲ್ ಪಡೆದುಕೊಂಡಿದೆ ಎಂಬುದನ್ನು ಪರಿಚಯಿಸಿಕೊಳ್ಳುವುದು ಉತ್ತಮ ಆಕಸ್ಮಿಕವಾಗಿ ನಿಮ್ಮ ಅಂದರೆ ನೀವು ಗೆಳೆಯ ಜಿಪಿಆರ್ಎಸ್ ಮಾಡಿರುವುದು ತಿರಸ್ಕೃತಗೊಂಡರೆ ಯಾವುದೇ ತರನಾದಂತಹ ಹಣ ಬರುವುದಿಲ್ಲ ಅದಕ್ಕಾಗಿ ಕೂಡಲೇ ನೀವು ನಿಮ್ಮ ಬೆಳೆ ಪರಿಹಾರ ಅಂದರೆ ಜಿಪಿಆರ್ಎಸ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ…
https://play.google.com/store/apps/details?id=com.crop.offcskharif_2021
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ .. ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ ಮಾಡಿರುವಂತದ್ದು ಅಪ್ರುವಲ್ ಪಡೆದುಕೊಂಡಿದೆ ಅಥವಾ ತಿರಸ್ಕೃತಗೊಂಡಿದೆ ಎಂಬ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ…
ಒಂದು ವೇಳೆ ನಿಮ್ಮ ಜಿಪಿಆರ್ಎಸ್ ಸ್ಟೇಟಸ್ ನಲ್ಲಿ ತಿರಸ್ಕೃತಗೊಂಡಿದ್ದರೆ ನಿಮ್ಮ ಖಾತೆಗೆ ಯಾವುದೇ ತರನಾದಂತಹ ಬೆಳೆ ಪರಿಹಾರದ ಹಣ ಜಮಾ ಆಗುವುದಿಲ್ಲ ಅದಕ್ಕಾಗಿ ಇದರ ಬಗ್ಗೆ ಸಂಪೂರ್ಣ ವಿವರಣೆಯನ್ನು ತಿಳಿದುಕೊಳ್ಳಲು ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ…
ಹಾಗೆ ಇತರರ ರೈತರಿಗೂ ಸಹಾಯ ಮಾಡಿ ಧನ್ಯವಾದಗಳು
‘ಮಳೆ ಆಶ್ರಿತ ಮತ್ತು ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೂ ಬೆಳೆ ನಷ್ಟ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ಸುಮಾರು 7 ಲಕ್ಷ ರೈತರಿಗೆ ಲಾಭವಾಗಲಿದೆ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಈ ಪರಿಹಾರ ವಿತರಿಸಲಾಗುವುದು’ ಎಂದರು.
‘ಕೇಂದ್ರದಿಂದ ಎನ್ಡಿಆರ್ಎಫ್ ಪರಿಹಾರ ₹3,454 ಕೋಟಿ ಬಂದಿತ್ತು. 27.50 ಲಕ್ಷ ರೈತರಿಗೆ ₹2,451 ಕೋಟಿಯನ್ನು ಮೇ ತಿಂಗಳ ಮೊದಲ ವಾರದಲ್ಲಿಯೇ ವಿತರಿಸಲಾಗಿದೆ. ಎನ್ಡಿಆರ್ಎಫ್ನ ಉಳಿದ ಹಣ ಮತ್ತು ರಾಜ್ಯ ಸರ್ಕಾರದಿಂದ ₹272 ಕೋಟಿ ಸೇರಿಸಿ ನಷ್ಟ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ಇನ್ನೊಂದು ವಾರದಲ್ಲಿ ಪರಿಹಾರ ಪಾವತಿಸಲು ಸಾಧ್ಯವಾಗುವಂತೆ ಅಧಿಕಾರಿಗಳು ಎಲ್ಲ ತಯಾರಿ ಮಾಡಿಕೊಂಡಿದ್ದಾರೆ’ ಎಂದರು.
ಮುಂಗಾರು ಸ್ಥಿತಿಯ ಬಗ್ಗೆಯೂ ಸಭೆಯಲ್ಲಿ ಅವಲೋಕನ ನಡೆಸಲಾಗಿದೆ. ವಾಡಿಕೆಯಂತೆ ಪೂರ್ವ ಮುಂಗಾರು ಮಳೆ 115 ಮಿಮೀ ಆಗುತ್ತದೆ. ಆದರೆ, ಈ ಬಾರಿ 150 ಮಿಮೀ ಮಳೆ ಆಗಿದೆ. ಕಳೆದ ವರ್ಷ ಶೇ 71ರಷ್ಟು ಮಳೆ ಕೊರತೆ ಆಗಿತ್ತು. ಈ ಬಾರಿ ಒಂದು ಭಾಗಕ್ಕೆ ಸೀಮಿತವಾಗದೆ, ಎಲ್ಲ ಭಾಗಗಳಲ್ಲೂ ಮಳೆ ಬಂದಿದೆ. ಐದು ಜಿಲ್ಲೆಗಳಲ್ಲಿ ವಾಡಿಕೆ, ನಾಲ್ಕು ಜಿಲ್ಲೆಗಳಲ್ಲಿ ಅಧಿಕ ಮತ್ತು ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದೆ’ ಎಂದರು.
‘ಕೃಷಿ ವಿಮೆ ಮೂಲಕವೂ ರೈತರಿಗೆ ಈ ಬಾರಿ ಅತೀ ಹೆಚ್ಚು ₹1,654 ಕೋಟಿ ಪರಿಹಾರ ಸಿಕ್ಕಿದೆ. ಇನ್ನೂ ₹130 ಕೋಟಿ ಪರಿಹಾರ ನೀಡಲು ಬಾಕಿ ಇದೆ’ ಎಂದರು.
‘ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ಈಗಾಗಲೇ ವರದಿ ನೀಡಿದ್ದಾರೆ. ಮಳೆ ಸಮಯದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ಶನಿವಾರದಿಂದ ವಿಭಾಗವಾರು ಸಭೆ ನಡೆಸುತ್ತೇನೆ’ ಎಂದೂ ಕೃಷ್ಣ ಬೈರೇಗೌಡ ತಿಳಿಸಿದರು.