ಭೂ ಸರ್ವೇ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಕರುನಾಡ ಜನತೆಗೆ ನಮಸ್ಕಾರಗಳು…!
ಪ್ರಸ್ತುತ ಈ ನಮ್ಮ ಧ್ಯಾನ ಘರ್ಜನೆ ವೆಬ್ಸೈಟ್ನಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕರ್ನಾಟಕದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಭೂ ಸರ್ವೇ ಹುದ್ದೆಗಳಿಗೆ ಅರ್ಜಿಯ ಬಗ್ಗೆ ತಿಳಿಯೋಣ ಬನ್ನಿ..
ಪ್ರಸ್ತುತ ಈ ಲೇಖನದಲ್ಲಿ ಭೂ ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆವಾನಿಸಿದ್ದು ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು ಇರಬೇಕು ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ..
ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ…?
ಅರ್ಜಿ ಸಲ್ಲಿಸಬೇಕೆಂದರೆ ಭಾರತ ಸರ್ಕಾರದಿಂದ ಮಾನ್ಯತೆ ಗೊಂಡಿರುವಂತಹ ಕಾಲೇಜುಗಳ ಮುಖಾಂತರ ಐಟಿಐ ಡಿಪ್ಲೋಮಾ ಎಂಜಿನಿಯರಿಂಗ್ ಮುಗಿಸಿರುವಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟಿರಲಾಗಿರುತ್ತದೆ.
ಅರ್ಜಿ ಸಲ್ಲಿಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ, ಸರ್ವೇಯರ್ ಹಾಗೂ ಎಡಿಎಲ್ಆರ್ ಹುದ್ದೆಗಳ ಭರ್ತಿಗೆ ಸಂಬಂಧ ಬಜೆಟ್ನಲ್ಲಿ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದಡಿಯಲ್ಲಿ ಉದ್ಯೋಗ ಹುಡುಕುತ್ತಿರುವರಿಗೆ ಒಂದು ಮಹತ್ವದ ಸುದ್ದಿ, ಕೆಪಿಎಸ್ಸಿ ಮೂಲಕ 750 ಸರ್ವೇಯರ್(Surveyor)ಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ: ಸಚಿವ ಕೃಷ್ಣ ಬೈರೇಗೌಡ
ಮಹತ್ವದ ಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು 750 ಭೂಮಾಪಕರು ಮತ್ತು 35 ಭೂ ದಾಖಲೆಗಳ ಸಹಾಯಕ ನಿರ್ದೇಶಕರನ್ನು (ADLR) ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ನೇರವಾಗಿ ನೇಮಕ(direct recruitment) ಮಾಡಲು ನಿರ್ಧರಿಸಿದೆ. ಸೋಮವಾರ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಘೋಷಣೆ ಮಾಡಿದರು.