ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿಲ್ವಾ? ಯಾರನ್ನು ಸಂಪರ್ಕಿಸಬೇಕು? ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ ಮಾಹಿತಿ..!

ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿಲ್ವಾ? ಯಾರನ್ನು ಸಂಪರ್ಕಿಸಬೇಕು? ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now

Gruhalakshmi Scheme Money Credit Problem And Solution: ರಾಜ್ಯದ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಂಡವರಲ್ಲಿ ಲಕ್ಷಾಂತರ ಮಹಿಳೆಯರಿಗೆ ಇಂದಿಗೂ ಹಣ ಜಮೆಯಾಗಿಲ್ಲ. ಅಂತಹವರು ಏನು ಮಾಡಬೇಕು? ಯಾರನ್ನು ಸಂಪರ್ಕಿಸಬೇಕು? ಈ ಬಗ್ಗೆ ಮಾಹಿತಿ ಇಲ್ಲಿದೆ.

ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಮೊದಲನೇ ಎಲ್ಲ ಮಹಿಳೆಯರ ಖಾತೆಗೆ ಜಮಾ ಆಗಿದ್ದು ಹಲವು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಇದಕ್ಕೆ ಹಲವಾರು ಕಾರಣಗಳಿದ್ದು ಈಗ ಎರಡನೇ ಕಂತಿನ ಹಣ ಬಿಡುಗಡೆಗೆ ಕೇವಲ ಸ್ವಲ್ಪ ದಿನಗಳಿದ್ದು ಈಗಾಗಲೇ ಎರಡನೇ ಹಣ ಬಿಡುಗಡೆ ಆಗಬೇಕಾಗಿತ್ತು ಆದರೆ ಹಲವು ಕಾರಣಾಂತರಗಳಿಂದಾಗಿ ಬಿಡುಗಡೆಯಾಗಿಲ್ಲ…

ಎರಡನೇ ಕಂತಿನ್ ಹಣ ಬಿಡುಗಡೆ ಯಾವಾಗ…?

ಸಪ್ಟೆಂಬರ್ 22ನೇ ತಾರೀಕಿನಂದು ಎರಡನೇ ಕಂತಿನ ಹಣ ಬಿಡುಗಡೆ ಮಾಡುತ್ತದೆ ಎಂದು ತಿಳಿಸಿದ್ದರು ಆದರೆ ಈಗ ಬಿಡುಗಡೆಯಾಗಿಲ್ಲ ಆದರೆ ಸಪ್ಟಂಬರ್ 30ರ ಒಳಗಾಗಿ ಹೆಣ್ಣು ಮಕ್ಕಳ ಮಹಿಳೆಯರ ಖಾತೆಗೆ ಎರಡನೇ ಕಂತಿನ ಹಣ ಜಮಾ ಆಗುವುದು ಎಂದು ತಿಳಿಸಿದ್ದಾರೆ…

ಯಾರಿಗೆ ಮೊದಲನೇ ಕಂತಿನ ಹಣ ಜಮಾ ಆಗಿಲ್ಲವು ಅವರಿಗೆ ಮೊದಲನೆಯ ಕಂಚನ ಹಾಗೂ ಎರಡನೇ ಕಂತಿನ ಹಣ ಒಟ್ಟಿಗೆ ಸೇರಿ ಜಮಾ ಆಗುತ್ತದೆ ಅಂದರೆ 4000 ಏಕಕಾಲಕ್ಕೆ ಜಮಾ ಆಗುವುದು ಎಂದು ತಿಳಿಸಿದ್ದಾರೆ…

ನಿಮ್ಮ ಖಾತೆಗೆ ಹಣ ಯಮ ಆಗಬೇಕೆಂದರೆ ಈ ಕೆಳಗಿನ ನಿಯಮಗಳನ್ನು ಪಾಲಿಸಿ…

ಮಹಿಳೆಯರ ಹೆಸರು ಆಧಾರ್ ಕಾರ್ಡ್ ನಲ್ಲಿರುವಂತೆ ಇರಬೇಕು ಹಾಗೂ ಮಹಿಳೆಯರ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗಿರಬೇಕು ಹಾಗೆಯೇ ಹೆಸರಿನಲ್ಲಿ ಬದಲಾವಣೆ ಇರಬಾರದು…

ಈ ಮೇಲಿನ ನಿಯಮಗಳನ್ನು ಪಾಲಿಸಿ. ಇಲ್ಲವಾದಲ್ಲಿ ನಿಮಗೆ ಈ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗುವುದು ತಡವಾಗುತ್ತದೆ…

ಅದಕ್ಕಾಗಿ ಈ ಮೇಲಿನ ನಿಯಮಗಳನ್ನು ಪಾಲಿಸಿದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಆಗುವುದು..

ಕರ್ನಾಟಕ ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ ಬಿಡುಗಡೆ…!

ಯಾವ ಯೋಜನೆ ಎಂಬುದರ ಬಗ್ಗೆ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…..

ಕಲಬುರಗಿ, ಸೆಪ್ಟೆಂಬರ್ 18; ಕರ್ನಾಟಕ ಸರ್ಕಾರ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ತೆರೆಯಲಾಗುತ್ತಿರುವ ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ಭಾನುವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ‌ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ನಂತರ ಮುಖ್ಯಮಂತ್ರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಸಚಿವ ಪ್ರಿಯಾಂಕ್ ಖರ್ಗೆ‌ ಸೇರಿದಂತೆ ಹಲವರು ಲಾಂಛನ ಬಿಡುಗಡೆ ಮಾಡಿದರು.

ರಾಜ್ಯದಾದ್ಯಂತ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರದಲ್ಲಿ ಮಕ್ಕಳನ್ನು ನೋಡಿಕೊಳ್ಳಲು ತರಬೇತಿ ಪಡೆದ ‘ಕೇರ್ ಟೇಕರ್ಸ್’ ಸಹ ನಿಯೋಜನೆ ಮಾಡಲಾಗುತ್ತದೆ.
ಕೂಸಿನ ಮನೆ ಯೋಜನೆ ವಿವರ; ‘ಕೂಸಿನ ಮನೆ’ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ” ಎಂದರು.

2023-24ರ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದಂತೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು ‘ಕೂಸಿನ ಮನೆ’ ಶಿಶುವಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.

ಈ ಕೇಂದ್ರಗಳು ಸ್ಥಳೀಯ ಕಾರ್ಮಿಕರ ಅನುಕೂಲಕ್ಕೆ ತಕ್ಕಂತೆ ದಿನದಲ್ಲಿ 6 ಗಂಟೆ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಸ್ಥಳೀಯ ಗ್ರಾಮ ಪಂಚಾಯಿತಿಗಳೇ ಕೇಂದ್ರದ ಕಾರ್ಯನಿರ್ವಹಿಸುವ ಸಮಯವನ್ನು ನಿರ್ಧರಿಸಲಿದೆ.

4000 ಶಿಶು ಪಾಲನಾ ಕೇಂದ್ರಗಳಿಗೆ ಪ್ರತಿ ಕೇಂದ್ರಕ್ಕೆ ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ 10 ಜನ ಕೇರ್ ಟೇಕರ್ಸ್‌ಗಳನ್ನು (ಮಕ್ಕಳ ಆರೈಕೆದಾರರು) ಇರಲಿದ್ದಾರೆ. ಇವರಿಗೆ ಮೊಬೈಲ್ ಕ್ರಶ್ ದೆಹಲಿ ಸಂಸ್ಥೆಯ ಸಹಕಾರದಿಂದ ತರಬೇತಿ ನೀಡಲಾಗುತ್ತದೆ. ಇದರಿಂದ 40,000 ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಕ್ಕಳ ಆರೈಕೆಯ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀಗೆ ನೋಂದಣಿ ಮಾಡಿಸಿದ್ದ ಲಕ್ಷಾಂತರ ಮಹಿಳೆಯರಿಗೆ ಎರಡು ತಿಂಗಳಾದರೂ ಖಾತೆಗೆ ಹಣ ಜಮೆಯಾಗಿಲ್ಲ. ಇಂತಹ ಸಮಸ್ಯೆಯನ್ನು ನೀವು ಎದುರಿಸುತ್ತಿದ್ದರೆ ಇದಕ್ಕೆ ನೋಂದಣಿ ವಿಫಲ ಅಥವಾ ನೀಡಿದ ದಾಖಲಾತಿಗಳ ಲಿಂಕ್‌ ಮಾಡಿಸದಿರುವುದು ಪ್ರಮುಖ ಕಾರಣವಾಗಿದೆ.ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ತಿಂಗಳಗಳು ಕಳೆದಿವೆ. ಈಗಾಗಲೇ ಬಹುತೇಕ ಮಂದಿಗೆ ಎರಡನೇ ಕಂತಿನ ಹಣ ಕೂಡಾ ಸಂದಾಯವಾಗುತ್ತಿದೆ. ಆದರೆ, ಕೆಲವರಿಗೆ ಮೊದಲ ತಿಂಗಳ (ಆಗಸ್ಟ್‌) ಹಣವೇ ಸಂದಾಯವಾಗಿಲ್ಲ. ಇದರಿಂದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದು, ಸರ್ಕಾರ ಮೋಸ ಮಾಡಿದೆ ಎಂದು ಬೇಸರಗೊಂಡಿದೆ.
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀಗೆ ನೋಂದಣಿ ಮಾಡಿಸಿದ್ದ ಲಕ್ಷಾಂತರ ಮಹಿಳೆಯರಿಗೆ ಎರಡು ತಿಂಗಳಾದರೂ ಖಾತೆಗೆ ಹಣ ಜಮೆಯಾಗಿಲ್ಲ. ಇಂತಹ ಸಮಸ್ಯೆಯನ್ನು ನೀವು ಎದುರಿಸುತ್ತಿದ್ದರೆ ಇದಕ್ಕೆ ನೋಂದಣಿ ವಿಫಲ ಅಥವಾ ನೀಡಿದ ದಾಖಲಾತಿಗಳ ಲಿಂಕ್‌ ಮಾಡಿಸದಿರುವುದು ಪ್ರಮುಖ ಕಾರಣವಾಗಿದೆ.ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ತಿಂಗಳಗಳು ಕಳೆದಿವೆ. ಈಗಾಗಲೇ ಬಹುತೇಕ ಮಂದಿಗೆ ಎರಡನೇ ಕಂತಿನ ಹಣ ಕೂಡಾ ಸಂದಾಯವಾಗುತ್ತಿದೆ. ಆದರೆ, ಕೆಲವರಿಗೆ ಮೊದಲ ತಿಂಗಳ (ಆಗಸ್ಟ್‌) ಹಣವೇ ಸಂದಾಯವಾಗಿಲ್ಲ. ಇದರಿಂದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದು, ಸರ್ಕಾರ ಮೋಸ ಮಾಡಿದೆ ಎಂದು ಬೇಸರಗೊಂಡಿದೆ.ಹಣ ಬಾರದಿದ್ದರೆ ಯಾರನ್ನು ಸಂಪರ್ಕಿಸಬೇಕು?

ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯುಡಿ 2,000 ರೂಪಾಯಿ ಬಾರದಿದ್ದರೆ, ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಚಿಕ್ಕಬಳ್ಳಾಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಶ್ವತ್ಥಮ್ಮ ತಿಳಿಸಿದ್ದಾರೆ.

ಎಲ್ಲಾ ದಾಖಲೆಗಳಲ್ಲೂ ಮಾಹಿತಿ ಒಂದೇ ಇರಬೇಕು

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿರುವ ಬ್ಯಾಂಕ್‌ ಖಾತೆಯಲ್ಲಿಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತು ಅರ್ಜಿಯೊಂದಿಗೆ ಸಲ್ಲಿಸಿರುವ ಎಲ್ಲಾ ದಾಖಲೆಗಳಲ್ಲಿ ಮಾಹಿತಿ ಒಂದೇ ಇರಬೇಕು. ಒಂದು ವೇಳೆ ವ್ಯತ್ಯಾಸ ಉಂಟಾಗಿದ್ದರೆ ಕೂಡಲೇ ಪರಿಶೀಲಿಸಿ ಸರಿಪಡಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಬ್ಯಾಂಕ್‌ಗಳಲ್ಲಿ ಒಮ್ಮೆ ಖಾತೆ ಮೊತ್ತ ಪರಿಶೀಲಿಸಿ

ಕೆಲವೊಮ್ಮೆ ಹಣ ಸಂದಾಯವಾಗಿದ್ದರೂ ಈ ಬಗ್ಗೆ ಯಾವುದೇ ಸಂದೇಶವು ಮೊಬೈಲ್‌ಗೆ ಬಂದಿರುವುದಿಲ್ಲ. ಇದಕ್ಕೆ ತಾಂತ್ರಿಕ ಕಾರಣವೂ ಇರಬಹುದು. ಹೀಗಾಗಿ, ನಿಮ್ಮ ಗ್ರಾಮದ ಜನರಿಗೆ ಗೃಹಲಕ್ಷ್ಮೀ ಹಣ ಜಮೆಯಾಗಿ ನಿಮಗೆ ಜಮೆಯಾಗಿಲ್ಲ ಎನ್ನುವುದಾದರೆ ಒಮ್ಮೆ ನಿಮ್ಮ ಖಾತೆಯ ಮೊತ್ತವನ್ನು ಚೆಕ್‌ ಮಾಡಿಕೊಳ್ಳಬೇಕು. ಜತೆಗೆ ಆಧಾರ್‌ಗೆ ಇತರೆ ಬ್ಯಾಂಕ್‌ ಖಾತೆ ಜೋಡಣೆಯಾಗಿದೆಯೇ ಆ ಖಾತೆಯಲ್ಲಿ ಹಣ ಬಂದಿದಿಯೇ ಎಂದು ಚೆಕ್‌ ಮಾಡಿಕೊಳ್ಳಬೇಕು ಎನ್ನುತ್ತಾರೆ ಅಧಿಕಾರಿಗಳು.

ನೇರವಾಗಿ ತೆರಳಿ ಸಂಪರ್ಕಿಸಿ ವಿಚಾರಿಸಿ

ಕುಟುಂಬ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಪ್ರಮುಖವಾಗಿದೆ. ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಈ ಆಶಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ಪಾವತಿಸುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಜಮಾ ಆಗದಿದ್ದರೆ, ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಉಪನಿರ್ದೇಶಕಿ ಮಾಹಿತಿ ನೀಡಿದೆ.80 ಲಕ್ಷಕ್ಕೂ ಅಧಿಕ ಜನರಿಗೆ ಹಣ ಜಮೆ

ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 80 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಇದುವರೆಗೂ ಹಣ ಸಂದಾಯವಾಗಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ. ಯಾರಿಗೆಲ್ಲಾ ಹಣ ಬಂದಿಲ್ಲವೋ ಅವರಿಗೆ ಮೊದಲ ಕಂತಿನ ಹಣವೂ ಸೇರಿ ಒಟ್ಟು 4 ಸಾವಿರ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *